Site icon Suddi Belthangady

ಉಜಿರೆ: ನ್ಯಾಚುರೋಪತಿ ಕಾಲೇಜಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಬಡ್ಡಿ ಪಂದ್ಯಾಟ

ಉಜಿರೆ: ಉಜಿರೆಯ ಶ್ರೀ ಧ.ಮ ನ್ಯಾಚುರೋಪತಿ ಕಾಲೇಜಿನಲ್ಲಿ ಸೆ.27ರಂದು ಪುರುಷರ ಕಬಡ್ಡಿ ಪಂದ್ಯಾಟ ನಡೆಯಿತು.ಧರ್ಮಸ್ಥಳದ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ. ಪಂದ್ಯಾಟವನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಎ.ಜೆ.ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಹರೀಶ್ ಗೌಡ ಹಾಗೂ ನ್ಯಾಚುರೋಪತಿ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಉಪಸ್ಥಿತರಿದ್ದರು.

ಈ ಪಂದ್ಯಾಟದಲ್ಲಿ ಮಂಗಳೂರು ವಲಯದ ಒಟ್ಟು 19 ತಂಡಗಳು ಭಾಗವಹಿಸಿದ್ದವು.ಈ ಕಾರ್ಯಕ್ರಮದಲ್ಲಿ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ವಂದನಾರ್ಪಣೆ ಹಾಗೂ ವಿದ್ಯಾರ್ಥಿಗಳು ನಿರೂಪಣೆ ಮಾಡಿದರು.

Exit mobile version