Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ಬಿ ಒಕ್ಕೂಟದ ಸಭೆ: ಸಹಾಯಧನದ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯರಾದ ಭವಾನಿಯವರ ಮನೆಯ ಗೋಡೆಯು ವಿಪರೀತ ಮಳೆಯಿಂದ ಕುಸಿದು ಬಿದ್ದ ಕಾರಣ ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿರುವ ರೂ.10,000 ಸಹಾಯಧನದ ಚೆಕ್ ವಿತರಣೆಯನ್ನು ಯೋಜನಾಧಿಕಾರಿಯ ಸುರೇಂದ್ರರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದಿನೇಶ್ ಹಾಗು ಶಾಂಭವಿ ರೈ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾ ಪ್ರತಿನಿಧಿ ಕವಿತಾ, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ದಾಖಲಾತಿ ಸಮಿತಿಯವರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Exit mobile version