Site icon Suddi Belthangady

ಬೆಳ್ತಂಗಡಿ: ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ನವೀಕೃತ ಶಾಖೆಯ ಉದ್ಘಾಟನೆ- ಗ್ರಾಹಕರ ಸಂಪರ್ಕ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಗ್ರಾಹಕರ ಸಂಪರ್ಕ ಕಾರ್ಯಕ್ರಮ ಮತ್ತು ನವೀಕೃತ ಶಾಖೆಯ ಉದ್ಘಾಟನೆ ಸೆ.28ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಶಾಖಾ ಕಚೇರಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಭಗೀರಥ ಜಿ., ನಿರ್ದೇಶಕರುಗಳಾದ ಸುಜೀತಾ ವಿ.ಬಂಗೇರ, ತನುಜಾ ಶೇಖರ್ ಜಯವಿಕ್ರಮ್ ಕಲ್ಲಾಪು ದಿವಾಕರ್, ಆನಂದ ಪೂಜಾರಿ, ಜಗದೀಶ್ಚಂದ್ರ ಡಿ.ಕೆ., ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ನಿವೃತ್ತ ಎಸ್.ಪಿ.ಪೀತಾಂಬರ ಹೇರಾಜೆ, ಸಂಘದ ವಿಶೇಷ ಅಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಕಾನೂನು ಸಲಹೆಗಾರ ಪ್ರಶಾಂತ್, ಗ್ರಾಹಕರು, ಕೇಂದ್ರ ಕಚೇರಿ ಮತ್ತು ಶಾಖಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಥ್ ಕುಮಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಸ್ವಾಗತಿಸಿ, ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ವಂದಿಸಿದರು.

Exit mobile version