Site icon Suddi Belthangady

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲಾ ಶಿಕ್ಷಕ ಶಶಿಧರ್ ಡಿ ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ ತೃತೀಯ ಭಾಷೆ ತುಳು ವಿಷಯದ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯನ್ನಾಗಿ ನಿಯೋಜನೆ ಮಾಡಲಾಗಿದೆ.

ಪ್ರಸ್ತುತ ಇವರು ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿಭಾಗದ ತೃತೀಯ ಭಾಷೆ ತುಳು ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version