ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ನೇತೃತ್ವದಲ್ಲಿ ಮುಗುಳಿ ದ.ಕ.ಜಿ.ಹಿ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

0

ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ ಕಾರ್ಯಕ್ರಮವು ಮುಗುಳಿ ದ.ಕ.ಜಿ.ಹಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ ಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ವಹಿಸಿಕೊಂಡಿದ್ದರು.

ರಾಜ ಕೇಸರಿ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ದಕ್ಷಿಣ ಜಿಲ್ಲಾದಾದ್ಯಂತ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ದೊಡ್ಡ ಉತ್ಸಾಹದೊಂದಿಗೆ ಮಾಡಲು ನಾವು ನಿಮ್ಮ ಜೊತೆ ತಯಾರಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಭಾ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಮುಗಳಿ ನಾರಾಯಣರಾವ್ ರಾಜ ಕೇಸರಿ ತಾಲೂಕು ಅಲ್ಲದೆ ರಾಜ್ಯಾದ್ಯಂತ ನನ್ನ ನಿಸ್ವಾರ್ಥ ಸೇವೆ ಮೂಲಕ ರಾಜ್ಯದಲ್ಲಿ ಮನೆ ಮಾತಾಗಿದೆ.ಇನ್ಮುಂದಕ್ಕೆ ದೇಶಾದ್ಯಂತ ತನ್ನ ಸಂಘಟನೆಯನ್ನು ವಿಸ್ತರಿಸಿರಿ ನಮ್ಮ ಬೆಳ್ತಂಗಡಿ ತಾಲೂಕಿಗೆ ಹೆಸರು ತಂದು ಕೊಡುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀದೇವಿ ಅಪ್ಪಿಕಲ್ಸ್ ಸಂತೆಕಟ್ಟೆ ಮಾಲಕಿ ಮಂಜುಳಾ, ಜೆಪಿ ಅಟ್ಟಾಕರ್ಸ್ ಬುಟ್ಟುಗುಡ್ಡೆ ಅಧ್ಯಕ್ಷರು ಕರುಣಾಕರ ಬಂಗೇರ, ಮೋರಸ್ ಮುಗುಳಿ ಶಾಲೆ ಮುಖ್ಯೋಪಾಧ್ಯಾಯರು ಲೂಸಿ ಲೀನಾ, ರಾಜ ಕೇಸರಿ ಜಿಲ್ಲಾ ಸಂಚಾಲಕ ಪ್ರಸಾದ್ ಕುಲಾಲ್, ರಾಜ ಕೇಸರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹರೀಶ್ ಕುಮಾರ್ ಶೆಟ್ಟಿ, ರಾಜ ಕೇಸರಿ ಬಂಟ್ವಾಳ ತಾಲೂಕು ನೆಲ್ಲಿಗುಡ್ಡೆ ಅಧ್ಯಕ್ಷ ಗೌತಮ್ ಪೂಜಾರಿ, ಕಳಮೆ ರಾಜ ಕೇಸರಿ ಬಂಟ್ವಾಳ ತಾಲೂಕು ಸಂಚಾಲಕ ರಮೇಶ್ ನಾಯ್ಕ್, ಕೆ ಸಿ ಬೆಳ್ತಂಗಡಿ ಮಾಲಕ ದೇವರಾಜ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂರಕ್ಕಿಂತ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡು‌ ಉಚಿತ ನೇತ್ರ ತಪಾಸಣೆ ಶಿಬಿರದ ಪ್ರಾಯೋಜತಕವನ್ನು ಪಡೆದುಕೊಂಡರು.

ಸಂತೋಷ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಗುರುವನಕೆರೆ ಸ್ವಾಗತಿಸಿ, ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here