Site icon Suddi Belthangady

ಉಜಿರೆಯಲ್ಲಿ ದ.ಕ., ಉಡುಪಿ, ಚಿಕ್ಕಮಗಳೂರು ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಉಜಿರೆ: ಉಜಿರೆ ಶ್ರೀ ಧ.ಮ.ಪಾಲಿಟೆಕ್ನಿಕ್ ಕಾಲೇಜು ಆಥಿತ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಅಂತರ್ ಪಾಲಿಟೆಕ್ನಿಕ್ ಕಾಲೇಜು ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಅ.1ರಂದು ಇಂದ್ರಪ್ರಸ್ಥ ಒಳಾಂಗಣದಲ್ಲಿ ನಡೆಯಿತು.

ಪಂದ್ಯಾಟವನ್ನು ಪ್ರೊ ಕಬಡ್ಡಿ ಯು.ಪಿ.ಯೋಧ, ಗುಜರಾತ್ ತಂಡದ ಆಟಗಾರ ರತನ್ ಕೆ.ಎ. ಉದ್ಘಾಟಿಸಿ ಶುಭ ಹಾರೈಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು.

ಎಸ್. ಡಿ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್., ಎಸ್ ಡಿ.ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಾಲಿಟೆಕ್ನಿಕ್ ಕಾಲೇಜು ಮೆನೇಜರ್ ಚಂದ್ರನಾಥ್ ಜೈನ್, ಉಪನ್ಯಾಸಕರು ಸಹಕರಿಸಿದರು. ಮೂರು ಅಂತರ್ ಜಿಲ್ಲೆಯ ಆಟಗಾರರು, ತರಬೇತುದಾರರು ವಿದ್ಯಾರ್ಥಿಗಳು ಹಾಜರಿದ್ದರು.

ಮೆಕ್ಯಾನಿಕ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ಸ್ವಾಗತಿಸಿದರು. ಸಾಯಿ ಚರಣ್ ಪರಿಚಯಿಸಿದರು. ಉಪನ್ಯಾಸಕ ಸಂಪತ್ ಕುಮಾರ್ ನಿರೂಪಿಸಿ, ಕಾಲೇಜಿನ ಸಿವಿಲ್ ವಿಭಾಗದ ಉಪನ್ಯಾಸಕ ಪ್ರವೀಣ್ ವಂದಿಸಿದರು.

Exit mobile version