Site icon Suddi Belthangady

ಗಾಂಧೀಜಿ ಬದುಕು ಪ್ರೇರಣೆ: ಮಧೂರು ಮೋಹನ ಕಲ್ಲೂರಾಯ

ಬೆಳ್ತಂಗಡಿ: ಗಾಂಧೀಜಿ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ನಾಯಕ. ಗಾಂಧೀಜಿಯವರ ಸಮಯಪ್ರಜ್ಞೆ, ಸರಳ ಜೀವನ, ಸೇವಾ ಮನೋಭಾವ, ಸ್ವಚ್ಛತೆ, ನುಡಿದಂತೆ ನಡೆದ ಅವರ ಬದುಕು ನಮಗೆಲ್ಲ ಪೇರಣೆ ಎಂದು ನಿವೃತ್ತ ಉಪನ್ಯಾಸಕ, ದ.ಕ ಗಮಕ ಕಲಾ ಪರಿಷತ್ತು ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಹೇಳಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ನಮ್ಮನ್ನು ಅಗಲಿ ಎಷ್ಟೋ ವರ್ಷಗಳಾದರೂ, ಅವರು ಬಿಟ್ಟುಹೋದ ಆದರ್ಶಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ನಮ್ಮ ಮೇಲೆ ಗಾಢವಾಗಿ ಪರಿಣಾಮ ಬೀರಿದ ಗಾಂಧೀಜಿಯವರ ಸತ್ಯ, ಅಹಿಂಸೆ, ಶಾಂತಿ ಹಾಗೂ ಸರಳ ಜೀವನ- ಈ ಸಂದೇಶಗಳನ್ನು ಎಲ್ಲರೂ ಪಾಲಿಸಿದರೆ ಜಗತ್ತಿನ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದರು.

ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ, ಕೆ.ಎಂ. ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ, ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅರೋಗ್ಯ್ರ ರಕ್ಷಾ ಸಮಿತಿಯ ಸದಸ್ಯ ಅಬ್ದುಲ್‌ ಕರೀಮ್ ಗೇರುಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Exit mobile version