ತೋಟತ್ತಾಡಿ: 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

0

ತೋಟತ್ತಾಡಿ: ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಅರಂತಬೈಲು ಮತ್ತು ನವರಾತ್ರಿ ಭಜನಾ ಸಮಿತಿ ಆರಂತಬೈಲು ಇದರ ಜಂಟಿ ಆಶ್ರಯದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಳ್ಳಾಲ್ತಿ ಭಜನಾ ಮಂದಿರದ ಗೌರವಾಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ, ಕಾರ್ಯದರ್ಶಿ ಸುಜಿತ್ ಶೆಟ್ಟಿ ಹಳೆ ಕಕ್ಕಿಂಜೆ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಉಪಾಧ್ಯಕ್ಷ ಉಷಾ ರಮಾನಂದ ಪೂಜಾರಿ, ಕಾರ್ಯದರ್ಶಿ ವಿನುತಾ ಶ್ರೀನಿವಾಸ ಪೂಜಾರಿ, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ, ಅರ್ಚಕ ಬಾಲಚಂದ್ರ ಬಳ್ಳಿ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು, ಮಾಜಿ ಪದಾಧಿಕಾರಿಗಳು, ನವರಾತ್ರಿ ಸಮಿತಿಯ ಮಾಜಿ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಮಂದಿರದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here