ಬೆಳ್ತಂಗಡಿ ಜೆಸಿಐ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್ ಘಟಕದ ಸ್ಮಿತಾ ಐತಾಳ್ ಹಾಗೂ ಜೆಸಿಐ ಬಂಟ್ವಾಳ ಘಟಕದ ಆಶಾಮಣಿಯವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ. ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಲೇಡಿ ಜೆಸಿ ಸಂಯೋಜಕಿ ಶ್ರುತಿ ರಂಜಿತ್, ಉಪಾಧ್ಯಕ್ಷೆ ಆಶಾ ಪ್ರಶಾಂತ್ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಿದರು. ಉಪಾಧ್ಯಕ್ಷ ಚಂದ್ರಹಾಸ್ ಬಳಂಜ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ, ರಾಷ್ಟ್ರೀಯ ತರಬೇತುದಾರ ರಾಕೇಶ್ ಹೊಸಬೆಟ್ಟು, ಜೆಸಿಐ ಬಂಟ್ವಾಳದ ಪೂರ್ವ ಅಧ್ಯಕ್ಷ ಅಡ್ವಾಕೇಟ್ ದಯಾನಂದ ರೈ, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಸದಸ್ಯ ವಿನಾಯಕ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷ ಶೈಲೇಶ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿ ಅನುದೀಪ್ ಜೈನ್ ಹಾಗೂ ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕುಮಾರ್ ಕೆ. ಯವರು ವಾಚಿಸಿದರು.

LEAVE A REPLY

Please enter your comment!
Please enter your name here