ಲಾಯಿಲದ ಒಂದನೇ ವಾರ್ಡ್ ನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ, ಕೊರತ್ತಿಕಜೆ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

0

ಲಾಯಿಲ: ಲಾಯಿಲ ಗ್ರಾಮದ ಒಂದನೇ ವಾರ್ಡ್ ನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ, ಯುವ ನಾಯಕ ಕೊರತ್ತಿಕಜೆ ನಿವಾಸಿ ರೋಹಿತ್ ರಾಯನ್ ಡಿ’ಸೋಜ(40 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಅ.5ರಂದು) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಅವಿವಾಹಿತರಾಗಿದ್ದು, ಪಿಡ್ಲ್ಯೂಡಿ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ದಿವಂಗತ ಅಲ್ಪೋನ್ಸ್ ಡಿಸೋಜ ಅವರ ಪುತ್ರ. ಮೃತರು ಸಹೋದರಿ ವಿದೇಶದಲ್ಲಿ ಉದ್ಯೋಗದಲ್ಲಿರುವ ರೇಷ್ಮಾ ಡಿ’ಸೋಜ ಅವರನ್ನು ಅಗಲಿದ್ದಾರೆ.

ಲಾಯಿಲ ಪಡ್ಲಾಡಿ ಹಿ.ಪ್ರಾ.ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ರೋಹಿತ್ ರವರ ನಿಧನಕ್ಕೆ ಹಳೆ ವಿದ್ಯಾರ್ಥಿ ಸಂಘ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದೆ. ಅವರ ಅಂತಿಮ ಕಾರ್ಯಕ್ರಮ ಸೋಮವಾರ(ಅ.7ರಂದು) ಬೆಳಗ್ಗೆ 10 ಘಂಟೆಗೆ ಬೆಳ್ತಂಗಡಿ ಕೇಂದ್ರ ಚರ್ಚ್ ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here