Site icon Suddi Belthangady

ಬೆಳ್ತಂಗಡಿ: ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ-ಲಲಿತ ಕಲಾ ಸಂಘದ ಭಿತ್ತಿ ಪತ್ರ ಅನಾವರಣ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2024- 25 ನೇ ಸಾಲಿನ ಸಾಹಿತ್ಯ ಹಾಗೂ ಲಲಿತ ಕಲಾ ಸಂಘದ ಉದ್ಘಾಟನೆಯು ಅ.10ರಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ವಹಿಸಿಕೊಂಡು ಅಧ್ಯಕ್ಷೀಯ ನುಡಿಗಳನ್ನಾಡಿದರೂ.ಕಾರ್ಯಕ್ರಮದ ಉಧ್ಘಾಟನೆಯನ್ನು ಉಪ ಪ್ರಾಂಶುಪಾಲರೂ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದಂತಹ ಬಿ.ಎ ಶಮಿವುಲ್ಲಾರವರು ಉದ್ಘಾಟನಾ ಮಾತುಗಳನ್ನಾಡಿದರು.ಸಾಹಿತ್ಯ ಹಾಗೂ ಲಲಿತಾ ಕಲಾ ಸಂಘದ ವಿದ್ಯಾರ್ಥಿ ಪ್ರತಿನಿದಿ ಮೋಕ್ಷ ತ್ರಿತೀಯ ಬಿ.ಎ ಅನಿಸಿಕೆ ವ್ಯಕ್ತಪಡಿಸಿದರು.

ಕನ್ನಡ ಭಾಷಾ ಉಪನ್ಯಾಸಕ ಹಾಗೂ ಕಾರ್ಯಕ್ರಮ ಸಂಯೋಜಕ ಸತೀಶ್ ಸಾಲ್ಯಾನ್ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪ್ರದ್ವಿತ ವಂದಿಸಿದರು.ವಿದ್ಯಾರ್ಥಿ ಪ್ರತಿನಿಧಿ ಕೀರ್ತನ್ ತ್ರಿತೀಯ ಬಿ ಕಾಂ, ವೇದಿಕೆ ಹಂಚಿಕೊಂಡರು.ಉಪನ್ಯಾಸಕ ವೃಂದ, ಕಛೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದೀಕ್ಷ ಹಾಗೂ ಲಕ್ಷಿಶ್ರೀ ನಿರೂಪಿಸಿದರು.

Exit mobile version