Site icon Suddi Belthangady

ಬೆಳ್ತಂಗಡಿ: ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅ.12ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಯಾನೆ ಕುಂಹಿಮೋನು ಎಂಬಾತನನ್ನು ಪಡಂಗಡಿಯಿಂದ ದಸ್ತಗಿರಿ ಮಾಡಲಾಗಿದೆ.

ಆರೋಪಿಯ ವಿರುದ್ಧ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು, ಚಿಕ್ಕಮಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ ಕೇರಳದಲ್ಲಿ ಸುಮಾರು 34 ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.

Exit mobile version