ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಕ್ರೀಡಾ ಕೂಟ

0

ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ಇದರ ವಾರ್ಷಿಕ ಮಹಾಸಭೆಯ ಪ್ರಯುಕ್ತ ಕ್ರೀಡಾಕೂಟ ಅ.13ರಂದು ಉಜಿರೆ ಅಜ್ಜರಕಲ್ಲು ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನುಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ಉದ್ಘಾಟಿಸಿ, ಶುಭ ಕೋರಿದರು.

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಮಿತಯ ಗೌರವಾಧ್ಯಕ್ಷ ಪ್ರಕಾಶ್ ಗೌಡ ಅಪ್ರಮೇಯ, ಕಾರ್ಯದರ್ಶಿ ಶೇಖರ್ ಗೌಡ ಉಜಿರೆ, ಗೌರವ ಸಲಹೆಗಾರ ಆನಂದ ಗೌಡ ಉಜಿರೆ, ಕೋಶಾಧಿಕಾರಿ ಬಾಲಕೃಷ್ಣ ಕೋರಮೇರು, ಯುವ ವೇದಿಕೆಯ ಮಾಜಿ ಅಧ್ಯಕ್ಷ ಉಮೇಶ್ ಗೌಡ ಶಿವಾಜಿನಗರ, ಯುವ ವೇದಿಕೆಯ ಅಧ್ಯಕ್ಷ ಸೋಮಶೇಖರ್ ಮಾಚಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ರಾಜೇಶ್ವರಿ ಕಿರಿಯಾಡಿ, ಕಾರ್ಯದರ್ಶಿ ಮೀನಾಕ್ಷಿ ನಾರ್ಣಪ್ಪ ಗೌಡ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ರೀಡಾಕೂಟದ ನಿರ್ವಹಣೆಯನ್ನು ಲಕ್ಷ್ಮಣ ಗೌಡ, ರಮೇಶ್ ಪೈಲಾರ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here