ಬೆಳ್ತಂಗಡಿ: ವಕೀಲ ಸಂಘದ ವತಿಯಿಂದ ಈದ್ ಮಿಲಾದ್ ಆಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ ನೇತೃತ್ವದಲ್ಲಿ ಈದ್ ಮಿಲಾದ್ ಆಚರಣೆ ಕಾರ್ಯಕ್ರಮವನ್ನು ಅ.14ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ. ಹೆಚ್., ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ, ಹಿರಿಯ ವಕೀಲ ಮಹಮ್ಮದ್ ಹನೀಫ್ ಹಾಗೂ ಮುಮ್ತಾಜ್ ಬೇಗಂ ಉಪಸ್ಥಿತರಿದ್ದರು.

ಮುಖ್ಯ ಭಾಷಣಕಾರರಾಗಿ ಬಂಟ್ವಾಳದ ವಕೀಲ ಇಮ್ತಿಯಾಜ್ ಬಿ. ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ವಸಂತ ಮರಕಡ ಅಧ್ಯಕ್ಷತೆ ವಹಿಸಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಸ್ವಾಗತಿಸಿದರು. ವಕೀಲ ನವಾಜ್ ಶರೀಫ್ ವಂದಿಸಿ, ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕವಾಳಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here