Site icon Suddi Belthangady

ಬೆಳ್ತಂಗಡಿ: ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಡಾ.ಕೆ.ಜಯಕೀರ್ತಿ ಜೈನ್‌ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ಡಾ.ಕೆ. ಜಯಕೀರ್ತಿ ಜೈನ್‌ ಧರ್ಮಸ್ಥಳ ಇವರನ್ನು ರಾಜ್ಯ ಸಂಘದ ಅಧ್ಯಕ್ಷ ಡಾ.ಎಲ್‌. ಭಯರಪ್ಪ ನೇಮಕ ಮಾಡಿದ್ದಾರೆ.

ಇವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version