Site icon Suddi Belthangady

ಕಲ್ಮಂಜ: ಪಾದಚಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್- ಪಾದಚಾರಿ ಗಂಭೀರ

ಕಲ್ಮಂಜ : ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಅ.16ರಂದು ಕಲ್ಮಂಜದಲ್ಲಿ ನಡೆದಿದೆ.

ಪಾದಚಾರಿ ರಿಕ್ಷಾದಿಂದ ಇಳಿದು ರಸ್ತೆ ದಾಟುವ ವೇಳೆಯಲ್ಲಿ ಘಟನೆ ಸಂಭವಿಸಿದೆ. ಬಸ್‌ನ ಅತೀ ವೇಗದ ಚಾಲನೆಯೇ ಘಟನೆ ಸಂಭವಿಸಲು ಕಾರಣ ಎಂದು ತಿಳಿದು ಬಂದಿದೆ. ಪಾದಚಾರಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version