Site icon Suddi Belthangady

ಬೆಳ್ತಂಗಡಿ: ಜೆಸಿಐ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಸಂವಹನ ಕಲೆ ಮತ್ತು ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು. ಜೆಸಿಐಯ ಪ್ರಾವಿಷನಲ್ ವಲಯ ತರಬೇತುದಾರ ಜೆಸಿಐ ಮುಂಡ್ಕೂರ್ ಭಾರ್ಗವ, ಘಟಕದ ಪೂರ್ವ ಅಧ್ಯಕ್ಷರು, ವಲಯ 15ರ ಲೇಡಿ ಜೆಸಿ ವಿಭಾಗದ ಸಂಯೋಜಕಿ ಮಾಲತಿ ಉಮೇಶ್ ಹಾಗೂ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿ ವರುಣ್ ಪ್ರಭು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ. ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಘಟಕದ ಪೂರ್ವಾಧ್ಯಕ್ಷ ಪ್ರಶಾಂತ್ ಲಾಯಿಲ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕೂರ್ ಭಾರ್ಗವ, ಘಟಕದ ಅಧ್ಯಕ್ಷ ಗಣೇಶ್ ಆಚಾರ್ಯ, ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಲೇಡಿ ಜೆಸಿ ಸಂಯೋಜಕಿ ಶ್ರುತಿ ರಂಜಿತ್, ಉಪಾಧ್ಯಕ್ಷ ಶೈಲೇಶ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಅಕ್ಷಯ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷೆ ಆಶಾ ಪ್ರಶಾಂತ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿ ಅನುದೀಪ್ ಜೈನ್ ಹಾಗೂ ಉಪಾಧ್ಯಕ್ಷ ಚಂದ್ರಹಾಸ್ ಬಳಂಜ ಮಾಡಿದರು. ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

Exit mobile version