Site icon Suddi Belthangady

ಇಳಂತಿಲ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ನಿಂದ ವೀಲ್ ಚೇರ್ ಹಸ್ತಾಂತರ

ಇಳಂತಿಲ: ಬೆಳ್ತಂಗಡಿ ತಾಲೂಕಿನ ಇಳಂತಿಲದ ಪಾರಡ್ಕ ನಿವಾಸಿ ಪದ್ಮನಾಭ ಕುಂಬಾರ ಎಂಬವರು 15 ವರ್ಷದಿಂದ ಬೆನ್ನುಮೂಳೆ ಮುರಿತದಿಂದ ಬಳಲುತ್ತಿದ್ದು ಅವರಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ನಿಂದ ವೀಲ್ ಚೇರ್ ಹಸ್ತಾಂತರಿಸಲಾಯಿತು. ಟ್ರಸ್ಟ್ ನ 552 ನೆಯ ಸೇವಾ ಯೋಜನೆಯಡಿಯಲ್ಲಿ ವಿತರಿಸಲಾಯಿತು.

ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಉಜಿರೆ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ, ಇಳಂತಿಲ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ರಾಧಿಕ ಉಪಸ್ಥಿತರಿದ್ದರು.

Exit mobile version