ಬೆಳ್ತಂಗಡಿ: ಕಾವ್ಯಶ್ರೀ ಸೇವಾ ಟ್ರಸ್ಟ್ ಬೆಂಗಳೂರು ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ- ತಾಲೂಕಿನ ಇಬ್ಬರು ಶಿಕ್ಷಕಿಯರು ಆಯ್ಕೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಿ. ಎಮ್. ಶ್ರೀ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಾಲತಿ ದಿನೇಶ್ ಕುಮಾರ್ ಮತ್ತು ಜೆನಿಫರ್ ಮಸ್ಕರೇನ್ಹಸ್ ಸರಕಾರಿ ಪ್ರಾಥಮಿಕ ಅತಿಥಿ ಶಿಕ್ಷಕರಾಗಿ ನೇಮಕಗೊಂಡು, ಶಾಲೆಯಲ್ಲಿ ಉತ್ತಮ ಶಿಕ್ಷಕರಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ, ಪ್ರಾಥಮಿಕ ಅತಿಥಿ ಶಿಕ್ಷಕರ ರಾಜ್ಯ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉತ್ತಮ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿ, ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

LEAVE A REPLY

Please enter your comment!
Please enter your name here