Site icon Suddi Belthangady

ಉಜಿರೆ: ರಾಜ್ಯಮಟ್ಟದ ಭಾಷಣ ಸ್ಪರ್ಧೆ- ಉಜಿರೆ ಎಸ್.ಡಿ.ಎಂ. ಬಿ.ಇಡಿ. ಕಾಲೇಜು ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

ಉಜಿರೆ: ರಾಷ್ಟ್ರೋತ್ಥಾನ ಪರಿಷತ್ 60 ವರ್ಷ ಪೂರೈಸುತ್ತಿರುವ ಶುಭಸಂದರ್ಭದಲ್ಲಿ ಪ್ರಶಿಕ್ಷಣ ಭಾರತಿ ವತಿಯಿಂದ ಅ.19ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಥಣಿಸಂದ್ರ, ಬೆಂಗಳೂರಿನಲ್ಲಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಂ. ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಇಂಗ್ಲೀಷ್ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರೂ.15,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.

ಇವರು ಸೆ.23ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ತೊಕ್ಕೊಟ್ಟು, ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರೂ.2000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡು ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Exit mobile version