ವೇಣೂರು: ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

0

ವೇಣೂರು: ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅ.19ರಂದು ಸುದರ್ಶನ ಚಕ್ರಗ್ರಹಣ ಎಂಬ ಯಕ್ಷಗಾನ ತಾಳಮದ್ದಳೆಯನ್ನು ವೇಣೂರಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘದ ಸದಸ್ಯರು ನಡೆಸಿಕೊಟ್ಟರು.

ಹಿಮ್ಮೇಳದಲ್ಲಿ ಭಾಗವತರಾಗಿ ಬಲಿಪ ಶಿವಶಂಕರ ಭಟ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್ ಹಾಗೂ ಬೆಳಾಲು ಗಣೇಶ ಭಟ್, ಚಕ್ರತಾಳದಲ್ಲಿ
ಇದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಸುಷೇಣರವರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೆಯ ತರಗತಿಯ ರಂಜನಿ ಹಾಗೂ ಮೂರನೇ ತರಗತಿಯ ಸುಷೇಣರು ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.

ಒಂಬತ್ತನೇ ತರಗತಿಯ ಕನ್ನಡ ಪಾಠದಲ್ಲಿ ಇರುವ ಈ ಭಾಗವನ್ನು ನಡೆಸಲು ಶಾಲಾ ಮುಖ್ಯ ಪ್ರಬಂಧಕ ಕೆ. ಶಿವರಾಮ ಹೆಗ್ಡೆ ಅವಕಾಶವನ್ನು ನೀಡಿದ್ದು, ಶಾಲಾ  ಸಂಚಾಲಕಿ ಶೀಲಾ ಕೆ. ಎಸ್. ಹೆಗ್ಡೆ, ಶಾಲಾ ಮುಖ್ಯಶಿಕ್ಷಕಿ ಸುಜಾತ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ದಿ. ಬಲಿಪ ಪ್ರಸಾದ ಭಟ್ ಸ್ಮರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನ ಪ್ರಮುಖರು ನೆರೆದಿದ್ದರು.

LEAVE A REPLY

Please enter your comment!
Please enter your name here