ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಲಕ್ಷ್ಮೀ ನಾರಾಯಣ ಕೆ. ರವರಿಗೆ ”ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿ”

0

ಬೆಳ್ತಂಗಡಿ: ಬೆಂಗಳೂರು ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳ ಸಂಘ ರುಪ್ಸಾ ನೀಡುವ 2024-25ನೇ ಸಾಲಿನ ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಕೆ. ಭಾಜನರಾಗಿದ್ದಾರೆ.

ಇವರು ಅ.21ರಂದು ಬೆಂಗಳೂರು ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರುಪ್ಸಾ ಸಂಭ್ರಮ 2024ರ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಮತ್ತು ಇನ್ನಿತರ
ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here