Site icon Suddi Belthangady

ಬೆಳ್ತಂಗಡಿ: ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆ- ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8, ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ.24ರಂದು ಜರಗಲಿದೆ. ಇದರ ಸಮಾಲೋಚನಾ ಸಭೆಯು ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗನ ರಾಜಶ್ರೀ ಸುದರ್ಶನ್ ಮತ್ತು ತ್ರಿಶಾಲ ಉದಯಕುಮಾರ್ ಮಲ್ಲ, ರಜತ ಪಿ. ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು.

ಸಭೆಯ ಅಧ್ಯಕ್ಷತೆಯನ್ನು ಡಾ.ನವೀನ್ ಕುಮಾರ್ ಜೈನ್ ವಹಿಸಿದ್ದರು. ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು ಭಾಗವಹಿಸಿ ಕಾರ್ಯಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು, ಶಾಂತಿ ಮಂತ್ರದೊಂದಿಗೆ ಸಭೆ ಮುಕ್ತಾಯಗೊಂಡಿತು.

Exit mobile version