Site icon Suddi Belthangady

ಉಜಿರೆ: ಕರಾಟೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಹಮ್ಮದ್ ರಯ್ಯಾನ್ ಗೆ ಚಿನ್ನದ ಪದಕ

ಉಜಿರೆ: ಅಮರ್ ಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೆಷನ್, ಕರ್ನಾಟಕ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್, ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ವಿಶ್ವ ಕರಾಟೆ ಫೆಡರೇಶನ್ ಸಹಯೋಗದೊಂದಿಗೆ ಅ.20ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಹಮ್ಮದ್ ರಯ್ಯಾನ್ ಪ್ರಥಮ ಸ್ಥಾನದೊಂದಿಗೆ ಕಟಾ ಹಾಗೂ ಕುಮಿಟೆಯಲ್ಲಿ 2 ಚಿನ್ನದ ಪದಕ ಪಡೆದಿದ್ದಾರೆ.

ಮಹಮ್ಮದ್ ರಯ್ಯಾನ್ ಉಜಿರೆ ಗಾಂಧಿನಗರ ನಿವಾಸಿ  ಬಿ. ಎಚ್. ಇಬ್ರಾಹಿಂ ಹಾಗೂ ನೂರ್ ಜಹಾನ್ ದಂಪತಿ ಪುತ್ರ.

Exit mobile version