


ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.