ಪಟ್ರಮೆ: ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆ

0

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೂದಾನ ಗೌಡರ ಮಗ ಕೃಷಿ ಮಾಡಿಕೊಂಡಿರುವ ಹಿಂದೂ ಯುವಕ ಹರೀಶ್ ಗೌಡ(24) ಎಂಬಾತ ಫೇಸ್ ಬುಕ್ ನಲ್ಲಿ ಪರಿಚಯ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಕಾರು ನಿವಾಸಿ ಯುವತಿ ಸುಹಾನ(19) ಎಂಬಾಕೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜ. 8 ರಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.

ಮುಸ್ಲಿಂ ಯುವತಿ ಕಂಪ್ಯೂಟರ್ ತರಬೇತಿಗೆ ಹೋಗುತ್ತಿದ್ದು, ಈ ವೇಳೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮನೆಯವರು ಮೂಡಬಿದಿರೆ ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದೂರು ನೀಡಿದ್ದರು. ಇಬ್ಬರು ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮದುವೆಯಾಗಿರುವ ಬಗ್ಗೆ ತಿಳಿಸಿದ್ದು, ಮೂಡಬಿದಿರೆ ಪೊಲೀಸ್ ಠಾಣೆಗೆ ಹೋಗಿ ಸ್ವ ಇಚ್ಛೆಯಿಂದ ಯುವತಿ ಮದುವೆಯಾಗಿರುವುದಾಗಿ ಜ.9 ರಂದು ಹೇಳಿಕೆ ನೀಡಿ ಪ್ರಕರಣ ಸುಖಾಂತ್ಯ ಕಂಡಿದ್ದು ಬಳಿಕ ಯುವತಿ ಯುವಕನ ಜೊತೆ ತೆರಳಿದ್ದಾಳೆ.

LEAVE A REPLY

Please enter your comment!
Please enter your name here