ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ ಆಯ್ಕೆ

0

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ ಆಯ್ಕೆಯಾಗಿದ್ದಾರೆ. ಜ. 12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಕೋಶಾಧಿಕಾರಿಯಾಗಿ ಪ್ರಶಾಂತ್ ಮಚ್ಚಿನ, ಉಪಾಧ್ಯಕ್ಷರಾಗಿ ಸದಾಶಿವ ಹೆಗ್ಡೆ, ಸೌಮ್ಯ ಲಾಯಿಲ, ಜತೆ ಕಾರ್ಯದರ್ಶಿಯಾಗಿ ಸುಧಾಮಣಿ ಆರ್., ಕ್ರೀಡಾ ಸಂಚಾಲಕರಾಗಿ ಹರೀಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೇಖರ್ ಲಾಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಮಹಮದ್ ಸಿದ್ಧೀಕ್ ಮಲೆಬೆಟ್ಟು, ರಾಮಚಂದ್ರ ಶಿಶಿಲ, ಹರಿಣಾಕ್ಷಿ ಬದನಾಜೆ ಮತ್ತು ಯೋಗೀಶ್ ವೇಣೂರು ಆಯ್ಕೆಯಾದರು. ಜಿಲ್ಲಾ ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು ಆಯ್ಕೆ ಪ್ರಕ್ರಿಯೆ ನಡೆಸಿದರು.

ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಧರ್ಮಸ್ಥಳ, ವಿಠಲ್ ಸಿ. ಪೂಜಾರಿ ಹೊಸಂಗಡಿ, ಸಿ. ಕೆ. ಚಂದ್ರಕಲಾ ಹಾಗೂ ತಾಲೂಕಿನ ಯುವಕ ಮಂಡಲಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here