ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾ. 1ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಗುರು ನಾರಾಯಣ ಸೇವಾ ಸಂಘ ಸಲ್ಕೇರಿಯಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು
ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಕೊರಗಪ್ಪ ಪೂಜಾರಿ ಮಣಿಕಂಠ ಅಧ್ಯಕ್ಷರು ಶ್ರೀ ಗುರುನಾರಾಯಣ ಸೇವಾ ಸಂಘ ಸುಲ್ಲೇರಿ ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಶ್ರೀ ನಿತ್ಯಾನಂದ ನಾವರರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.
ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘ ಸುಲ್ಕೇರಿ ಇದರ ಗೌರವಾಧ್ಯಕ್ಷ ಸುಧೀರ್ ಎಸ್. ಪಿ., ಗುತ್ತು ಬರ್ಕೆಯವರಾದ ನಾರಾಯಣ ಪೂಜಾರಿ ಬೋಳುವಾಲು, ಆನಂದ ಪೂಜಾರಿ ಕುತ್ಯಾರು ಉಪಸ್ಥಿತರಿದ್ದರು.
ಶ್ರೀ ಮಹಾಮಾಯಿ ದೇವಸ್ಥಾನದ ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುತ್ಯಾರು, ಯೋಗಿಶ್ ಪೂಜಾರಿ ಬೋಳುವಾಲು ಹಾಗೂ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಹಲವಾರು ಭಕ್ತಾಭಿಮಾನಿಗಳು ಸಭೆಯಲ್ಲಿ ಸೇರಿದ್ದರು.
ಶ್ರೀ ಗುರುನಾಥ್ ಸೇವಾ ಸಂಘ ಸುಲ್ಕೇರಿಯ ಪ್ರಧಾನ ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿ ಕಾರ್ಯಕ್ರಮವನ್ನು ನಿರ್ವಹಿಸಿ ಬಂದ ಭಕ್ತಾಭಿಮಾನಿಗಳಿಗೆ ಧನ್ಯವಾದವನ್ನಿತ್ತರು.