ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಗುರು ನಾರಾಯಣ ಸೇವಾ ಸಂಘ ಲಾಯಿಲ ಗ್ರಾಮದಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಫೆ. 2ರಂದು ಸಂಜೆ ಗಂಟೆ 6 ಕ್ಕೆ ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಅಧ್ಯಕ್ಷರೂ ಲಾಯಿಲ ಜಿಲ್ಲಾ ಪಂಚಾಯತ್ ಕ್ಷೇತ್ರದ ವಲಯ ಸಂಚಾಲಕ ಲಕ್ಷ್ಮಣ ಪೂಜಾರಿ ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲದ ಶ್ರೀ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.
ವೇದಿಕೆಯಲ್ಲಿ ಸಂಘ ದ ಗೌರವ ಸಲಹೆಗಾರರಾದ ಕೃಷ್ಣಪ್ಪ ಪೂಜಾರಿ, ಆನಂದ ಪೂಜಾರಿ ನಿನಿಕಲ್ಲು ಹಾಗೂ ಲಾಯಿಲ ಗ್ರಾಮದ ಹಲವಾರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಗೌರವ ಸಲಹೆಗಾರ ಜಯಾನಂದ ಲಾಯಿಲರವರ ಸ್ವಾಗತದೊಂದಿಗೆ ಕಾರ್ಯಕ್ರಮ ಆರಂಭಗೊಂಡು, ಗುರು ನಾರಾಯಣ ಸೇವಾ ಸಂಘ ನಡ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಲಾಯಿಲ ಜಿಲ್ಲಾ ಪಂಚಾಯತ್ ವಲಯ ಸಂಚಾಲಕ ಸೌಮ್ಯ ಲಾಯಿಲಾ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.