ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರೆ ಫೆ. 12ರಂದು ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಉಜಿರೆ ಶರತ್ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬೆಳಿಗ್ಗೆ ಗಂಟೆ 8.00ರಿಂದ ಶ್ರೀ ಮಹಾಗಣಪತಿ ಮತ್ತು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ದೇವರ ಸನ್ನಿಧಿಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಮಧ್ಯಾಹ್ನ ಮಹಾಪೂಜೆ, ಸಂಜೆ 5-00ಕ್ಕೆ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ 8.30ಕ್ಕೆ ರಂಗಪೂಜೆ, ರಾತ್ರಿ 9.00ರಿಂದ ತುಳು ಹಾಸ್ಯಮಯ ನಾಟಕ ‘ಒರಿಯಾಂಡಲ ಸರಿ ಬೋಡು’ ಪ್ರದರ್ಶನ. ರಾತ್ರಿ 12ರಿಂದ ಕಾಳರಾತ್ರಿ ದೈವದ ನೇಮೋತ್ಸವ
ನಡೆಯಲಿದೆ.