ಉಜಿರೆ: ಫೆ. 3ರಂದು ಎಸ್. ಡಿ. ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್. ಎಸ್. ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸ. ಪ. ಪೂ. ಕಾಲೇಜು, ಪ್ರೌಢ ಶಾಲಾ ವಿಭಾಗ ಗೇರುಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಪ್ರತಾಪ್ ಸಿಂಹ ನಾಯಕ್ ಶಾಸಕ ವಿಧಾನ ಪರಿಷತ್, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್.ಎಸ್.ಎಸ್.ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರೇಶ್ ಹೆಬ್ಬಾರ್ ಪ್ರಭಾರಿ ಪ್ರಾಂಶುಪಾಲರು ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ:ದಿವಾಕರ ಮೇದಿನ, ಗ್ರಾಮ ಪಂಚಾಯತ್ ಅಧ್ಯಕ್ಷರು ಕಳಿಯ, ದಿವಾಕರ ಆಚಾರ್ಯ ನಿವೃತ್ತ ಉಪಪ್ರಾಂಶುಪಾಲರು ಸರಕಾರಿ ಪ. ಪೂ. ಕಾಲೇಜು ಪ್ರೌಢಶಾಲೆ ಗೇರುಕಟ್ಟೆ, ಗೋಪಾಲ ಎಂ., ಉಪಾಧ್ಯಕ್ಷರು ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಗೇರುಕಟ್ಟೆ, ಡಾ. ಅನಂತ ಭಟ್ ವೈದ್ಯರು ಗೇರುಕಟ್ಟೆ, ಈಶ್ವರಿ ಕೆ. ಉಪಪ್ರಾಂಶುಪಾಲರು ಸ. ಪ. ಪೂ. ಕಾಲೇಜು ಪ್ರೌಢಶಾಲೆ ಗೇರುಕಟ್ಟೆ, ಪ್ರೇಮ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಸ.ಪ.ಪೂ. ಕಾಲೇಜು ಪ್ರೌಢಶಾಲೆ ಗೇರುಕಟ್ಟೆ, ಎನ್.ಎಸ್.ಎಸ್. ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿಗಳು ಲೋಹಿತ್ ಮತ್ತು ಪುಷ್ಪಲತಾ ಪಿ. ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ.ಪ.ಪೂ. ಕಾಲೇಜು ಪ್ರೌಢಶಾಲೆ ಗೇರುಕಟ್ಟೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳ ಕ್ರಿಯಾಶೀಲವಾಗಿ ಭಾಗವಹಿಸಿದ್ದರು.