Site icon Suddi Belthangady

ಓಡೀಲು ಶ್ರೀ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 3ರಿಂದ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿದ್ದು 7ಕ್ಕೆ ಸಂಪನ್ನಗೊಳ್ಳಲಿದೆ.

ತಂತ್ರಿಗಳಾದ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಎಂ. ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಫೆ. 4ರಂದು ದೇವರಿಗೆ ಪಂಚಾಮೃತ ಅಭಿಷೇಕ ಶತರುದ್ರಾಭಿಷೇಕ, ನಿತ್ಯ ಬಲಿ ಉತ್ಸವ ಮಹಾಪೂಜೆ, ಭದ್ರಕಾಳಿ ಭಜನಾ ಮಂಡಳಿ ಬೆಂಜನ ಪದವು ಹಾಗೂ ಸಾಮಗನ ಭಜನಾಮೃತ ಮಂಗಳೂರು ತಂಡದಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಫೆ. 5ರಂದು ರುದ್ರ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಾಯಂಕಾಲ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ದೈವ ದೇವರ ಭೇಟಿ ನವಶಕ್ತಿ ಭಜನಾ ಮಂಡಳಿ ಬೊಳ್ಪಗುಡ್ಡೆ ಕಾವೂರು ಮತ್ತು ರಾಮಾಂಜನೇಯ ಭಜನಾ ಮಂಡಳಿ ಕಾರ್ಲ ಪೇರ್ನೆ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

Exit mobile version