ಅಪಘಾತದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

0

ಬೆಳ್ತಂಗಡಿ: ಲಾರಿಯ ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಬಳಿಕ ಈ ಪ್ರಕರಣದ ವಿರುದ್ಧ ಲಾರಿ ಚಾಲಕ ಚಾರ್ಮಾಡಿ ಸಿದ್ದಿಕ್(40) ಹೈಕೋರ್ಟ್ ವರೆಗೆ ಅಪೀಲು ಹೋಗಿದ್ದು ಅಲ್ಲಿ ಕೂಡ ಬೆಳ್ತಂಗಡಿ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದು ಶಿಕ್ಷೆ ಖಾಯಂ ಮಾಡಿತ್ತು ಬಳಿಕ ಲಾರಿ ಚಾಲಕ ಆರೋಪಿ ತಲೆಮರೆಸಿಕೊಂಡಿದ್ದು. ಇದೀಗ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಪ್ರಕರಣ 117/2006 200, 279, 304 (2) 19 ವರ್ಷದ ಹಿಂದಿನ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹಾಗೂ ಬೀಟಿಗೆ ಮಸೀದಿ ಅಧ್ಯಕ್ಷನಾಗಿರುವ ಸಿದ್ದಿಕ್(40) ಎಂಬಾತನನ್ನು ಫೆ. 6ರಂದು ಬಂಟ್ವಾಳ ಪೊಲೀಸ್ ಉಪ ಅಧಿಕ್ಷಕರು ವಿಜಯ್ ಪ್ರಸಾದ್ ನಿರ್ದೇಶನದಂತೆ, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ. ಜಿ. ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ ಮತ್ತು ಯಲ್ಲಾಪ್ಪ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ, ಚರಣ್, ದರೇಶ್ ರವರನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here