Site icon Suddi Belthangady

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ಕ್ಷಮಾ ಡಿ. ಎಚ್. ರಾಜ್ಯಮಟ್ಟದಲ್ಲಿ ಪ್ರಥಮ

ಧರ್ಮಸ್ಥಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಜ್ಯಾದ್ಯಂತ ಜ. 12ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಯುವ ಶಕ್ತಿ ದೇಶದ ಶಕ್ತಿ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಗೈಡ್ ವಿದ್ಯಾರ್ಥಿನಿ ಕ್ಷಮಾ ಡಿ. ಎಚ್. ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶಾಲೆಯ ಗೈಡ್ ಕ್ಯಾಪ್ಟನ್ ಗೀತಾ ಮಾರ್ಗದರ್ಶನ ನೀಡಿ, ಮುಖ್ಯ ಶಿಕ್ಷಕಿ ಪರಿಮಳ ಎಂ. ವಿ. ಪ್ರೋತ್ಸಾಹಿಸಿರುತ್ತಾರೆ.

Exit mobile version