Site icon Suddi Belthangady

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ. 23ರಂದು ಉದ್ಘಾಟಿಸಿ, ಶುಭ ಹಾರೈಸಿದರು.

ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ. ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Exit mobile version