ಮೂಡಬಿದ್ರೆ: ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ.
ಮೃತರು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ (35) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದಿರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ವಿವಾದಲ್ಲಿ ಹೋಗುತ್ತಿದ್ದರು. ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ಏಕಾಏಕಿಯಾಗಿ ಆಕ್ವಿವಾಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ದೂರಕ್ಕೆ ತಳ್ಳಲ್ಪಟ್ಟ ಸವಾರೆ, ಶಿಕ್ಷಕಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದರು.