ಉಜಿರೆ: ಭಾರತ್ ಆಟೋ ಕಾರ್ ಸಂಸ್ಥೆಯ ಸಮೀಪ ಮಾ.07ರಂದು ರಾತ್ರಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್ ಮಾಲಕ ಜಯಂತ್(56 ವ) ಭಾರತ್ ಶೋರೂಮ್ ಬಳಿ ಅಜಿತ್ ನಗರ ರಸ್ತೆಗೆ ತಿರುಗಿಸುವ ವೇಳೆ ಅನುಗ್ರಹದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ಮಾ.08 ರಂದು ಮೃತ ಪಟ್ಟಿದ್ದಾರೆ.

ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.