ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮಾ. 10 ರಿಂದ 14 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಮಾ. 10ರಂದು ಬೆಳಾಲು ಗ್ರಾಮಸ್ಥರಿಂದ, ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನ, ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಸಮರ್ಪಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಯ ಅಧ್ಯಕ್ಷ ಹೆಚ್. ಪದ್ಮ ಗೌಡ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರು, ಅನುವಂಶಿಕ ಆಡಳಿತ ಮೋಕ್ತೆಸರ ಪುಷ್ಪದಂತ ಜೈನ್, ಅರ್ಚಕ ಕೇಶವ ರಾಮಾಯಾಜಿ, ಊರವರ ಸ್ವಾಗತಿಸಿದರು.

ಅನಂತೋಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ, ಮೋಕ್ತೆಸರ ಜೀವಂದರ ಕುಮಾರ್ ಜೈನ್, ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಜನಾ ಮಂಡಳಿ ಗಳ ಪದಾಧಿಕಾರಿಗಳು ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂದ ಅಧ್ಯಕ್ಷರು ಸದಸ್ಯರು ಊರವರು ಮೆರವಣಿಗೆಯಲ್ಲಿ ಬಂದು ಹೊರೆಕಾಣಿಕೆ ಸಮರ್ಪಿಸಿದರು.