Site icon Suddi Belthangady

ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್) ನಿಧನ

ಬೆಳ್ತಂಗಡಿ: ಹಿರಿಯ ದಲಿತ ನಾಯಕ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ, ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾ. 15ರಂದು ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸೆಂಟ್ರಿಂಗ್ ಮೇಸ್ತ್ರಿಯಾಗಿದ್ದ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಾ, ಮಕ್ಕಳಾದ ಸುದೀಪ್, ಸುಪ್ರಿಯಾರನ್ನು ಅಗಲಿದ್ದಾರೆ.

ಮೃತರ ಮನೆಗೆ ಹಿರಿಯ ಉದ್ಯಮಿ, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ನಡ ಇದರ ಅಧ್ಯಕ್ಷ ಸಯ್ಯದ್ ಹಬೀಬ್ ಸಾಹೇಬ್, ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ , ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ. ವಸಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು , ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ರಮೇಶ್ ಆರ್., ಹಿರಿಯ ದಲಿತ ನಾಯಕರಾದ ವೆಂಕಣ್ಣ ಕೊಯ್ಯೂರು, ಸಂಜೀವ ಆರ್., ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಚೆನ್ನಕೇಶವ, ಮುಂಡಾಜೆ ಸಿ.ಎ ಬ್ಯಾಂಕ್ ನಿರ್ದೇಶಕ ರಾಘವ ಕಲ್ಮಂಜ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ನಿವೃತ್ತ ನೌಕರ ಶೀನ ಧರ್ಮಸ್ಥಳ ಸೇರಿದಂತೆ ನೂರಾರು ಜನರು ಭಾಗವಹಿಸಿ ಅಂತಿಮ ದರ್ಶನ ಪಡೆದರು.

Exit mobile version