

ಬೆಳ್ತಂಗಡಿ: ತಾಲೂಕು ಕಡಿರುದ್ಯಾವರ ಗ್ರಾಮದ ಕುಚ್ಚೂರುಬೈಲಿನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಮಾ. 23ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ಶ್ರೀ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಲ ನೆರವೇರಿಸುವುದೆರೊಂದಿಗೆ ಆಚರಿಸಲಾಯಿತು.
ಧಾರ್ಮಿಕ ಉಪಾನ್ಯಾಸದ ವೇದಿಕೆಯಲ್ಲಿ ಗ್ರಾಮದ ಪ್ರಗತಿಪರ ಕೃಷಿಕ ಶಂಕರ್ ಭಟ್ ಬೈಲೂರು ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಶುಭಕೋರಿದರು. ಶ್ರೀ ವನದುರ್ಗಾದೇವಿ ದೇವಸ್ಥಾನದ ಟ್ರಸ್ಟ್ ನ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರರವರ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಹಾಗೂ ಸರ್ವರನ್ನು ಸ್ವಾಗತಿಸಿದರು.
ಧಾರ್ಮಿಕ ಉಪಾನ್ಯಾಸವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ದಿವ ಕೊಕ್ಕಡ ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ರಕ್ಷಿತಾ, ಚಂದ್ರಶೇಖರ ಪೂಜಾರಿ, ನವ್ಯ, ಕೃಷ್ಣಪ್ಪ ಎಂ.ಕೆ. ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಭಾಕಾರ್ಯಕ್ರಮದ ನಿರೂಪಣೆಯನ್ನು ಭವ್ಯಶ್ರೀ ಕೀರ್ತಿರಾಜ್ ವಳಂಬ್ರ ನೆರವೇರಿಸಿದರು. ಟ್ಟಸ್ಟ್ ನ ಸರ್ವ ಸದಸ್ಯರು ಹಾಗೂ ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ಯವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ಏರ್ಪಡಿಸಲಾಯಿತು. ದೇವಸ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಮಂಜುನಾಥ ಗೌಡ ಕುಚ್ಚೂರು ಹೊಸಮನೆ ವಂದಿಸಿದರು.