ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಬೆಳಾಲು ಶಂಕರ ಗೌಡ ಬಂಧನ

0

ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಂದೆ- ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಶಂಕರ ಗೌಡ ಪಿಯುಸಿ ವಿದ್ಯಾರ್ಥಿನಿಯನ್ನು ಎಳೆದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದಲ್ಲಿರುವ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ.

ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕರ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here