ಉಜಿರೆ ಮಾಚಾರಿನ ಕೂಸಪ್ಪರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಮನೆಯ ಹಸ್ತಾಂತರ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಾತೃಶ್ರೀ ಡಾ.ಹೇಮಾವತಿ ವಿ. ಹೆಗ್ಗಡೆ ಯವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಮಾಣ ವಾದ ವಾಸ್ತಲ್ಯ ಮನೆ ಹಸ್ತಾಂತರ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು, ವಾತ್ಸಲ್ಯ ಮನೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರವರು ಹಸ್ತಾಂತರ ಮಾಡಿದರು.

ಅವರು ಮಾತನಾಡಿ ವಾತ್ಸಲ್ಯ ಮನೆಯನ್ನು ನಿರ್ಮಾಣ ಮಾಡಿ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸ. ಶ್ರೀ ಕ್ಷೇತ್ರದಿಂದ ಅದೆಷ್ಟೋ ಅಸಹಾಯಕರಿಗೆ ನೆರವನ್ನು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಾವು ಇಂತಹ ಕಾರ್ಯಕ್ರಮಗಳಿಗೆ ಕೈ ಜೋಡಿಸಬೇಕು. ನಾವು ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳುವ ಎಲ್ಲ ಕಾರ್ಯಕ್ರಮಗಳಿಗೆ ಜೊತೆಯಾಗಬೇಕು ಹಾರೈಸಿದರು ಎಂದರು.

ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಆರ್. ಬೆಳ್ತಂಗಡಿ,
ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ್ ಶೆಟ್ಟಿ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಗಣ್ಯರಾದ ರಾಮಚಂದ್ರ ಶೆಟ್ಟಿ, ಮಾಚಾರು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯ ಗೌಡ, ಉಜಿರೆ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪ್ರಶಾಂತ್ ಜೈನ್, ಯೋಜನೆಯ ಜಿಲ್ಲಾ ನಿರ್ದೇಶಕ
ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ ಕುಮಾರ್,
ವಲಯಧ್ಯಕ್ಷ ಉಮರಬ್ಬ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಉಜಿರೆ ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜ್ಞಾನವಿಕಾಸದ ಸಮನ್ವಯಧಿಕಾರಿ ಮಧುರಾ ವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ವನಿತಾ ವಂದಿಸಿದರು.

LEAVE A REPLY

Please enter your comment!
Please enter your name here