Site icon Suddi Belthangady

ಶ್ರೀ ರಾಮ ಕ್ಷೇತ್ರದ ಜಾತ್ರಾ ಮಹೋತ್ಸವ ಹನುಮಾನ್ ರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ದ ಪ್ರತಿಷ್ಠಾ ಜಾತ್ರೋತ್ಸವದ ಅಂಗವಾಗಿ ಕ್ಷೇತ್ರದ ಪ್ರೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರ ನೇತೃತ್ವದಲ್ಲಿ ಎ.5ರಂದು ರಾತ್ರಿ ಹನುಮಾನ್ ರಥೋತ್ಸವ ನಡೆಯಿತು.

ಬೆಳಿಗ್ಗೆ ದತ್ತಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಮಹಾ ಪೂಜೆ, ಸಂಜೆ ವಿವಿಧ ವೈದಿಕ ವಿಧಿವಿದಾನಗಳು, ರಾತ್ರಿ ದತ್ತಾತ್ರೇಯ ಮೂರ್ತಿ ಮತ್ತು ಆಂಜನೇಯ ದೇವರ ಮೂರ್ತಿ ಬಲಿ ಉತ್ಸವ ಶ್ರೀ ಹನುಮಾನ್ ರಥೋತ್ಸವ, ಕಟ್ಟೆ ಪೂಜೆ, ಕೆರೆ ದೀಪೋತ್ಸವ ನಡೆಯಿತು.

ಎ. 6ರಂದು ರಾಮ ನವಮಿ ಬೆಳಿಗ್ಗೆ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮಂಗಳ, ಮದ್ಯಾಹ್ನ ಶ್ರೀ ಪಾಲಕಿ ಬಲಿ ಉತ್ಸವ, ರಾತ್ರಿ ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ, ಮಹಾ ಬ್ರಹ್ಮ ರಥೋತ್ಸವ ನಡೆಯಲಿದೆ.

Exit mobile version