

ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಏ. 7ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ಇವರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು.

ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವ ವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು. ಈ ಒಂದು ಕಾರ್ಯಕ್ರಮಕ್ಕೆ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ, ಶಿಶಿಲ ಸ್ವಯಂ ಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ಹಾಗೂ ರಮೇಶ್ ಬಿ. ಶಿಶಿಲ ಸಹಕಾರ ನೀಡಿದರು. ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.