

ಬೆಳ್ತಂಗಡಿ :ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ಎರಡು ಕಾರುಗಳು ಏ.13ರಂದು ಮುಖಾಮುಖಿ ಢಿಕ್ಕಿ ಹೊಡೆದಿದೆ. ಧರ್ಮಸ್ಥಳದಿಂದ ಮುಂಡಾಜೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದಿದೆ.
ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ ಕಿರಿದಾಗ ಕಿರು ಸೇತುವೆಗಳಿದ್ದು, ಆಗಾಗ ಹೆಚ್ಚಿನ ಅಪಘಾತಗಳಿಗೆ ಕಾರಣವಾಗುತ್ತಿದೆ. ಘಟನೆಯಲ್ಲಿ ಎರಡೂ ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.