

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ ಎ. 14ರಂದು ನಡೆಯಿತು.

ಮುಖ್ಯೋಪಾದ್ಯಯ ಸುರೇಶ ಕೆ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ ಬಗ್ಗೆ, ಜೀವನದಲ್ಲಿನ ಕಷ್ಟದ ಕುರಿತು, ಶಿಕ್ಷಣದ ಬಗ್ಗೆ ತಿಳಿಸಿದರು. ಎಲ್ಲ ಶಿಕ್ಷಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.