ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಎ. 20ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿಕೊಟ್ಟು ಪ್ರಸಾದ ಸ್ವೀಕರಿಸಿದರು.
ಅವರೊಂದಿಗೆ ವಿಧಾನ ಪರಿಷತ್ ಮಾಜಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ ಆರ್., ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ರವಿ ಪೂಜಾರಿ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದರು.
ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಸಚಿವರನ್ನು ಶಾಲು ಹೊದಿಸಿ ಗೌರವಿಸಿದರು. ಮಠದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ ಉಪಾಧ್ಯಕ್ಷ ವಿಶ್ವನಾಥ ನಾಯಕ್, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಗೌಡ, ಸೇವಾ ಪ್ರತಿಷ್ಠಾಪನದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಾರಾಯಣ ಬೇಗೂರು, ಟ್ರಸ್ಟೀ ಪ್ರೊ. ಕೃಷ್ಣಪ್ಪ ಪೂಜಾರಿ, ಸಂಗೀತಾ ಹೆರಾಜೆ, ಸೋಮೇಗೌಡ, ಜಯರಾಮ್ ಬಂಗೇರ, ಉಮೇಶ ಬಂಗೇರ, ಹಾಗೂ ಇತರ ಗಣ್ಯರು ಹಾಜರಿದ್ದರು.