ಲಾಯಿಲ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವ ಪ್ರಾರಂಭ

0

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಶ್ರೀರಾಮಚಂದ್ರ ಮುಖ್ಯಪ್ರಾಣ ಸಹಿತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ಹಿಕ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಥಮ ದಿನ ಎ. 20ರಂದು ಬ್ರಹ್ಮಶ್ರೀ ವೇದಮೂರ್ತಿ ಕಾರ್ಕಳ ಶ್ರೀ ಭಾರತೀಯ ರಮಣ ಆಚಾರ್ಯರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಸಂಘ ಅರ್ಚಕ ವೇದಮೂರ್ತಿ ಕುಂಟಿನಿ ರಾಘವೇಂದ್ರ ಬಾಂಗೀನ್ನಾಯರ ನೇತೃತ್ವದಲ್ಲಿ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ನಾರಾಯಣ ಬೇಗೂರು, ವಿ.ಆರ್.ನಾಯಕ್, ಪ್ರೊ. ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ಸೋಮೇಗೌಡ, ವಸಂತ ಸುವರ್ಣ ಮುಂತಾದ ಹಿರಿಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮುಖಾಂತರ ಮಹಿಳೆಯರ ಭಜನಾ ಕಮ್ಮಟಗಳ ಒಗ್ಗೂಡುವಿಕೆಯಿಂದ ಪ್ರಾರಂಭವಾದ ಮಹಿಳೆಯರ ಸಭಾ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಉಮಾರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಲೋಕೇಶ್ವರಿ ವಿನಯ ಚಂದ್ರ ಗೌಡ, ಸವಿತಾ ಜಯದೇವ್, ಸಂಗೀತ ಹೇರಾಜೇ, ಸುಭಾಷಿಣಿ ಶೆಟ್ಟಿ, ಶ್ರೀದೇವಿ ಸಚಿನ್ ಮುಂಡ್ರಪಾಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಾರಾಯಣ ಬೇಗೂರ್ ನೀನಾದ ಕ್ಲಾಸಿಕಲ್ ಮುಂಡ್ರುಪಾಡಿ ಇವರಿಂದ ರಚಿತವಾದ ರಾಘವೇಂದ್ರ ಸ್ವಾಮಿಗಳ ಸ್ತುತಿಯ ಯೂಟ್ಯೂಬನ್ನು ಬಿಡುಗಡೆಗೊಳಿಸಿದರು.

ಮೋಕ್ಷ ವಿ. ಪೂಜಾರಿ ಕೋಡ್ಲಕ್ಕೆ ಸ್ವಾಗತಿಸಿ ಪ್ರಸ್ತಾವಿಸಿದರು. ಸುಧಾ ಆರ್. ಸಾಲಿಯಾನ್ ಮತ್ತು ಜಯಾನಂದ ಲಾಯಿಲ ನಿರೂಪಿಸಿದರು. ಸೌಮ್ಯ ಲಾಯಿಲ ಸಹಕರಿಸಿದರು. ಮಹಾಪೂಜೆಯ ಬಳಿಕ ಅನ್ನಸಂತರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಸುಶೀಲಾ ಎಸ್. ಹೆಗಡೆ ಎಲ್ಲರನ್ನು ವಂದಿಸಿದರು.

LEAVE A REPLY

Please enter your comment!
Please enter your name here