
ಬೆಳ್ತಂಗಡಿ: ಎ.30ರಂದು ಸಂಜೆ ಜೋರಾಗಿ ಬೀಸಿದ ಗಾಳಿ ಮಳೆಯ ವೇಳೆ ಉಜಿರೆ ಕಾಲೇಜು ರಸ್ತೆಯಲ್ಲಿ ಬೈಕ್ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಬೈಕ್ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.