ಮೇ. 2: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

0

ಮಚ್ಚಿನ: ಇತಿಹಾಸ ಪ್ರಸಿದ್ಧ ಬೆಳ್ತಂಗಡಿ ತಾಲೂಕು ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದೆ.

ಇದರ ಧ್ವಜ ಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಪೂರ್ವಹ್ನ ಗಂಟೆ 8:50ರ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತವನ್ನು ನಡೆಸಲು ಸಂಕಲ್ಪಿಸಿರುವರು. ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗಬೇಕಾಗಿ ಅಪೇಕ್ಷಿಸುವ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here